HomeKarnataka Newsಮಾತೃಭಾಷೆಯಲ್ಲಿಯೆ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತನ್ನಿ: ಕೇಂದ್ರ ಸರ್ಕಾರಕ್ಕೆ ಸಿಎಂ...

ಮಾತೃಭಾಷೆಯಲ್ಲಿಯೆ ಶಿಕ್ಷಣ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲು ಸೂಕ್ತ ಕಾನೂನುಗಳನ್ನು ತನ್ನಿ: ಕೇಂದ್ರ ಸರ್ಕಾರಕ್ಕೆ ಸಿಎಂ ಒತ್ತಾಯ

For Dai;y Updates Join Our whatsapp Group

Spread the love

ಬೆಂಗಳೂರು: ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ನಾಡನ್ನು ಉದ್ದೇಶಿಸಿ ಮಾತನಾಡಿದರು. ಮಾಹಿತಿ ತಂತ್ರಜ್ಞಾನ‌ ಯುಗ ಈಗ ಆರ್ಟಿಫಿಷಿಯಲ್ ತಂತ್ರಜ್ಞಾನದ ಯುಗವಾಗಿ ಮಾರ್ಪಾಡಾಗುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗಬಹುದು ಎಂಬ ಆತಂಕವೂ ಎದುರಾಗಿದೆ. ಕನ್ನಡ ಭಾಷೆ, ಪರಂಪರೆ ಮತ್ತು ಸಂಸ್ಕೃತಿಯನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸುವ ಕಾರ್ಯವನ್ನೂ ನಮ್ಮ ಸರ್ಕಾರ ಮಾಡುತ್ತಿದೆ.

ಇದರ ಭಾಗವಾಗಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ ಎಂದು ಕರೆ ನೀಡಿದರು.

ಇದರ ಜೊತೆಗೆ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ. ಕನ್ನಡ ಭಾಷೆ, ಪರಂಪರೆಗಳನ್ನು ಜಾಗತಿಕ ಮಟ್ಟಕ್ಕೆ ಎತ್ತರಿಸಬೇಕಾದ ಅನಿವಾರ್ಯತೆಯಿರುವುದರಿಂದ ಇದಕ್ಕಾಗಿ ಹೊಸ ನೀತಿಯನ್ನು ತರುವ ಸಿದ್ಧತೆಯಲ್ಲಿದ್ದೇವೆ ಎಂದರು.

ರಾಜ್ಯದಲ್ಲಿ ಶತಮಾನ ಪೂರೈಸಿರುವ ಸುಮಾರು 3000 ಸರ್ಕಾರಿ ಶಾಲೆಗಳಿವೆ. ರಾಜ್ಯದಲ್ಲಿ ಶಾಲಾ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ಸಲುವಾಗಿ ರಾಜ್ಯಾದ್ಯಂತ 2,500 ಕೋಟಿ. ರೂ. ವೆಚ್ಚದಲ್ಲಿ 800 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (KPS) ಪರಿವರ್ತಿಸಿ ಪ್ರತಿ ಶಾಲೆಯನ್ನು 4 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದು ಎಂದರು.

ಅಲ್ಪಸಂಖ್ಯಾತ ಸಮುದಾಯಗಳು ಮುಖ್ಯವಾಹಿನಿಗೆ ಬರುವ ಜೊತೆಗೆ ಸುಲಭವಾಗಿ ಸಮಾಜದಲ್ಲಿ ಬೆರೆಯುವಂತೆ ಪ್ರಾಥಮಿಕ ಕನ್ನಡವನ್ನು ಮದರಸಾ ಶಿಕ್ಷಣದ ಭಾಗವಾಗಿ ಕಲಿಸಲು ಪ್ರಸ್ತುತ ವರ್ಷದಲ್ಲಿ 180 ಮದರಸಾಗಳಲ್ಲಿ ಕನ್ನಡ ಕಲಿಸಲಾಗುತ್ತಿದೆ. ಇದನ್ನು ರಾಜ್ಯದಲ್ಲಿರುವ 1500 ಮದರಸಾಗಳಿಗೆ ವಿಸ್ತರಿಸಲಾಗುವುದು. ಇದಕ್ಕಾಗಿ ರೂ.483 ಕೋಟಿ ವೆಚ್ಚದಲ್ಲಿ 100 ಉರ್ದು ಶಾಲೆಗಳನ್ನು ಕೆ.ಪಿ.ಎಸ್. ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!