HomeKalaburagiಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ಸಾವು

ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ಅಗಲಿಕೆಯ ದುಃಖದಲ್ಲೇ ತಮ್ಮನೂ ಸಾವು

For Dai;y Updates Join Our whatsapp Group

Spread the love

ಕಲಬುರಗಿ: ಅಫಜಲಪುರ ತಾಲೂಕಿನ ಬಡದಾಳ ಗ್ರಾಮದಲ್ಲಿ ಸಹೋದರರ ಸಾವಿನ ಘಟನೆ ಜನರಲ್ಲಿ ತೀವ್ರ ನೋವು ಮೂಡಿಸಿದೆ. ಗ್ರಾಮದ ಹಿರಿಯ ನಿವಾಸಿ ಬಸವಂತರಾಯ ಸಣ್ಣಕ್ (81) ಅವರು ಅನಾರೋಗ್ಯದಿಂದ ಜನವರಿ 26ರಂದು ನಿಧನರಾಗಿದ್ದರು. ಅವರ ಅಂತ್ಯಕ್ರಿಯೆ ಜನವರಿ 27ರಂದು ನೆರವೇರಿತ್ತು.

ಅಣ್ಣನ ಅಗಲಿಕೆಯ ಆಘಾತಕ್ಕೆ ಒಳಗಾಗಿದ್ದ ಅವರ ತಮ್ಮ ಶಿವರಾಯ ಸಣ್ಣಕ್ (79) ಅವರು ಮಾನಸಿಕವಾಗಿ ಕುಸಿದು, ಮನೆಗೆ ಮರಳಿದ ಬಳಿಕ ಆರೋಗ್ಯ ಹದಗೆಟ್ಟು ಅದೇ ದಿನ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅಣ್ಣ-ತಮ್ಮಂದಿರಿಬ್ಬರೂ ಸತತ ಎರಡು ದಿನಗಳಲ್ಲಿ ಅಗಲಿರುವುದರಿಂದ ಗ್ರಾಮದಲ್ಲಿ ಶೋಕಾಚರಣೆ ಮುಂದುವರಿದಿದೆ.

ಇನ್ನೊಂದೆಡೆ, ದಾವಣಗೆರೆ ತಾಲೂಕಿನ ತುರ್ಚಗಟ್ಟ ಗ್ರಾಮದಲ್ಲಿ 35 ವರ್ಷದ ಯುವಕ ರಮೇಶ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಮೀನಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಮಾರ್ಗಮಧ್ಯೆಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!