ಕೋಲಾರ:- ಜಿಲ್ಲೆಯ ಕೆಜಿಎಫ್ ತಾಲೂಕಿನ ಎನ್.ಜಿ.ಹುಲ್ಕೂರು ಗ್ರಾಮದಲ್ಲಿ ಒಡಹುಟ್ಟಿದ ಅಣ್ಣಂದಿರಿಂದಲೇ ತಮ್ಮನ ಕೊಲೆ ನಡೆದಿರುವ ಘಟನೆ ಜರುಗಿದೆ. 60 ವರ್ಷದ ರಮೇಶ್ (೬೦) ಕೊಲೆಯಾದ ತಮ್ಮ. ಸಂಪಂಗಿ, ಸೀನಪ್ಪ, ರಘುಪತಿ ಕೊಲೆ ಮಾಡಿದ ಆರೋಪಿಗಳು.
Advertisement
ನಾಲ್ಕು ಗುಂಟೆ ಜಮೀನು ವಿಚಾರಕ್ಕೆ ಈ ಕೊಲೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೀನಪ್ಪ ಬಂಧಿತ ಆರೋಪಿ. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಕೈಗೊಂಡಿದ್ದಾರೆ. ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.