ದಾಂಡೇಲಿ: ಕುಟುಂಬದ ಆರ್ಥಿಕ ಸಂಕಷ್ಟದ ನಡುವೆ ಬೆಳೆದ ಪದ್ಮಾವತಿ ನಾಗಣ್ಣ ಮಾದಿಗ ಇಂದು ಸಿವಿಲ್ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದು, ಬಡತನದ ವಿರುದ್ಧದ ಹೋರಾಟಕ್ಕೆ ಪ್ರೇರಣಾದಾಯಕ ಉದಾಹರಣೆಯಾಗಿದ್ದಾರೆ.
ತಂದೆಯ ನಿಧನದ ನಂತರ ಅಣ್ಣಂದಿರು ಜೀವನವನ್ನೇ ತಂಗಿಯ ಶಿಕ್ಷಣಕ್ಕೆ ಅರ್ಪಿಸಿದರು. ರಸ್ತೆ ಬದಿಯಲ್ಲಿ ಚಪ್ಪಲಿ ಹೊಲಿಯುತ್ತಾ ಅವಳ ಕನಸಿಗೆ ಬೆಂಬಲ ನೀಡಿದರು.
ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿದ ಪದ್ಮಾವತಿ, ಇಂಗ್ಲಿಷ್ ಅಡೆತಡೆಯನ್ನು ಮೀರಿ ಕಾನೂನು ಪದವಿ ಪಡೆದು ನ್ಯಾಯಾಂಗ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಯಶಸ್ಸು ಕಂಡಿದ್ದಾರೆ.
ಮಾದಿಗ ಸಮುದಾಯದ ಉತ್ತರ ಕನ್ನಡ ಜಿಲ್ಲೆಯ ಮೊದಲ ಮಹಿಳಾ ನ್ಯಾಯಾಧೀಶೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪದ್ಮಾವತಿ, “ಕನ್ನಡ ಮಾಧ್ಯಮದಲ್ಲೂ ದೊಡ್ಡ ಸಾಧನೆ ಸಾಧ್ಯ” ಎಂಬ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ.



