ಕಾರವಾರ:- ಹೊನ್ನಾವರದ ಮಂಕಿಯಲ್ಲಿ ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಜರುಗಿದೆ.
ಮದನ್ ನಾರಾಯಣ ಖಾರ್ವಿ (17), ಸುಜನ್ ನಾರಾಯಣ ಖಾರ್ವಿ (15) ಮೃತರು. ಗುರುವಾರ ಕಬ್ಬಡ್ಡಿ ಆಡಿ, ನಂತರ ಇಬ್ಬರೂ ಸಂಜೆ ಸಮುದ್ರಕ್ಕೆ ಆಟ ಆಡಲು ಇಳಿದಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಇಬ್ಬರು ಕೊಚ್ಚಿ ಹೋಗಿದ್ದರು.
ತೀವ್ರ ಹುಡುಕಾಟದ ಬಳಿಕ ಗುರುವಾರ ತಡರಾತ್ರಿ ಇಬ್ಬರ ಶವಗಳು ಪತ್ತೆಯಾಗಿವೆ. ಮೃತದೇಹಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಈ ಸಂಬಂಧ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



