ಬೆಳಗಾವಿ:- ಘನಘೋರ ಕೃತ್ಯವೊಂದು ಬೆಳಗಾವಿಯಲ್ಲಿ ಜರುಗಿದೆ. ಮಲತಂದೆಯಿಂದಲೇ 3 ವರ್ಷದ ಬಾಲಕನನ್ನು ಹತ್ಯೆ ಮಾಡಲಾಗಿದೆ. ಈ ಘಟನೆ ಇಲ್ಲಿನ ಬೈಲಹೊಂಗಲ ತಾಲೂಕಿನ ಹಾರಗೊಪ್ಪ ಗ್ರಾಮದಲ್ಲಿ ಜರುಗಿದೆ.
ಕಾರ್ತಿಕ್ ಮುಕೇಶ್ ಮಾಂಜಿ(3) ಮೃತ ಬಾಲಕ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎರಡನೇ ಮದುವೆಯಾಗಿ ಬಿಹಾರ್ದಿಂದ ಕೆಲಸಕ್ಕೆಂದು ಓರ್ವ ಮಹಿಳೆ ಬಂದಿದ್ದು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ನನ್ನು ಕರೆದುಕೊಂಡು ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿಯ ಹತ್ತಿ ಫ್ಯಾಕ್ಟರಿಯಲ್ಲಿ ಮಹಿಳೆ ಮತ್ತು ಎರಡನೇ ಗಂಡ ಕೆಲಸ ಮಾಡುತ್ತಿದ್ದರು.
ಮದ್ಯಸೇವಿಸಿ ಬಂದ ಗಂಡ ಮಹೇಶ್ವರ್ ಮಾಂಜಿ ನಿನ್ನ ಮಗನನ್ನು ಯಾಕೆ ಕರೆದುಕೊಂಡು ಬಂದಿದ್ಯಾ ಅಂತಾ ಹೆಂಡತಿ ಜೊತೆ ಜಗಳ ಮಾಡಿದ್ದಾರೆ. ಗಂಡನೊಟ್ಟಿಗೆ ಮೂರು ಜನ ಸೇರಿಕೊಂಡು ಮಹಿಳೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಮೂರು ವರ್ಷದ ಮಗನನ್ನು ಬಿಟ್ಟು ತಾಯಿ ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮಗು ಕಾರ್ತಿಕ್ ಮೇಲೆ ರಾಕ್ಷಸಿ ವರ್ತನೆ ತೋರಿದ್ದಾರೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ್ದಾರೆ. ತಾಯಿ ವಾಪಸ್ ಮನೆಗೆ ಬಂದಾಗ ಮಗ ಕಾರ್ತಿಕ್ ಹತ್ಯೆ ಬೆಳಕಿಗೆ ಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ರಂಗೀಲಾ ದೂರು ನೀಡಿದ್ದು, ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.