ಅಕ್ರಮ ಸಂಬಂಧದ ಶಂಕೆ: ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯ ಬರ್ಬರ ಕೊಲೆ!

0
Spread the love

ಹಾಸನ:- ಇಲ್ಲಿನ ಸಕಲೇಶಪುರದ ಇಬ್ಬಡಿ ಕೊಣ್ಣೂರು ಗ್ರಾಮದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಮಹಿಳೆಯೊಬ್ಬಳನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜರುಗಿದೆ.

Advertisement

35 ವರ್ಷದ ಅನಿತಾ ಕೊಲೆಯಾದ ಮಹಿಳೆ. ಭಾನುವಾರ ಗದ್ದೆ ಕೆಲಸಕ್ಕೆ ಮಹಿಳೆ ತೆರಳಿದ್ದರು. ರಾತ್ರಿಯಾದರೂ ಆಕೆ ವಾಪಸ್ ಬಂದಿರಲಿಲ್ಲ. ಈ ಬಗ್ಗೆ ಮಹಿಳೆಯ ಪತಿ ಚಂದ್ರಶೇಖರ್ ಪೊಲೀಸರಿಗೆ ಮಾಹಿತಿ ನೀಡಿದ್ದ. ಬಳಿಕ ಹುಡುಕಾಟ ನಡೆಸಿದ್ದ.

ಹುಡುಕಾಟ ನಡೆಸುತ್ತಿದ್ದ ವೇಳೆ ಹೊಳೆ ಸಾಲಿನಲ್ಲಿ ಅನಿತಾ ಮೃತದೇಹ ಪತ್ತೆಯಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಸಕಲೇಶಪುರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇಬ್ಬಡಿ ಕೊಣ್ಣೂರು ಗ್ರಾಮದ ಚಂದ್ರಶೇಖರ್ ಹೆಬ್ಬಸಾಲೆ ಗ್ರಾಮದ ಅನಿತಾ ಜೊತೆ ಹನ್ನೆರಡು ವರ್ಷದ ಹಿಂದೆ ಮದುವೆಯಾಗಿದ್ದ. ಅಕ್ರಮ ಸಂಬಂಧದ ವಿಚಾರಕ್ಕೆ ಪತ್ನಿಯನ್ನೇ ಚಂದ್ರಶೇಖರ್ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.


Spread the love

LEAVE A REPLY

Please enter your comment!
Please enter your name here