ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿ: ತಪ್ಪಿದ ದುರಂತ, 33 ಮಂದಿ ಪಾರು!

0
Spread the love

ಮಂಡ್ಯ:- ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ ಅಯ್ಯಪ್ಪ ಮಾಲಾಧಾರಿಗಳಿದ್ದ ಬಸ್ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿರುವ ಘಟನೆ ಜರುಗಿದೆ.

Advertisement

ಯಾಲದಹಳ್ಳಿ‌ಕೊಪ್ಪಲು ಗ್ರಾಮದ 33 ಮಂದಿ ಅಯ್ಯಪ್ಪನ ಮಾಲೆ ಧರಿಸಿ ಸ್ವಾಮಿ ದರ್ಶನಕ್ಕೆ ಶಬರಿಮಲೆಗೆ ತೆರಳುತ್ತಿದ್ದರು. ಈ ವೇಳೆ ಕೇರಳದ ಏರಿಮಲೈ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತವಿಲ್ಲದೇ ಬಸ್‌ನಲ್ಲಿದ್ದವರು ಪಾರಾಗಿದ್ದಾರೆ.

ಕೆಲ ಮಾಲಾಧಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಘಟನಾ ಸ್ಥಳಕ್ಕೆ ಏರಿಮಲೈ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here