ಯಾವುದಾದರೂ ವರದಿ ಮುಖ್ಯಮಂತ್ರಿ ಮನೆಯಲ್ಲಿ ಬರೆಯಲು ಸಾಧ್ಯನಾ.?: ಸಚಿವ ಹೆಚ್.ಕೆ.ಪಾಟೀಲ್ ಪ್ರಶ್ನೆ

0
Spread the love

ಗದಗ: ಯಾವುದಾದರೂ ವರದಿ ಮುಖ್ಯಮಂತ್ರಿ ಮನೆಯಲ್ಲಿ ಬರೆಯಲು ಸಾಧ್ಯನಾ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ಮನೆಯಲ್ಲಿ ಜಾತಿ ಗಣತಿ ಬರೆದಿದ್ದಾರೆ ಎಂದು ಆರ್. ಅಶೋಕ್ ಹೇಳಿಕೆಗೆ ಗದಗದಲ್ಲಿ ಮಾತನಾಡಿದ ಅವರು,

Advertisement

ಯಾವುದಾದರೂ ವರದಿ ಮುಖ್ಯಮಂತ್ರಿ ಮನೆಯಲ್ಲಿ ಬರೆಯಲು ಸಾಧ್ಯನಾ. ಅದರಲ್ಲಿ ತಕರಾರು ಇದ್ದರೆ, ಹೀಗೆ ಮಾಡಿಲ್ಲ. ಹೀಗೆ ಮಾಡಿ ಎಂಬ ಅಭಿಪ್ರಾಯ ಸೂಚಿಸಿರಿ. ಅದನ್ನು ಸರಿಪಡಿಸುವುದು ಇದ್ದರೆ ಮಾಡುತ್ತೇವೆ ಎಂದರು.

ಸರ್ಕಾರ ಇಷ್ಟೆಲ್ಲಾ ಅವಕಾಶ ಕೊಟ್ಟಾಗಲೂ ರಾಜಕೀಯ ಮಾಡುವುದು ಸರಿಯಾದ ಕ್ರಮವಲ್ಲ. ಅವೈಜ್ಞಾನಿಕ ಯಾವುದು ಇದೆ. ವರದಿ ಓದದೇ ಅವೈಜ್ಞಾನಿಕ ಅಂದ್ರೆ ಹೇಗೆ? ನಿಮ್ಮ ಮನೆಗಳಲ್ಲಿ ಗಣತಿ ಮಾಡಿದ್ದರೆ ನಮ್ಮದು ಈ ಜಾತಿ ಅಂತ ಅದಕ್ಕೆ ನಿಮ್ಮ ಸಹಿ ಇದೆ. ಹೀಗಾಗಿ ಅದು ಹೇಗೆ ಅವೈಜ್ಞಾನಿಕ ಆಗುತ್ತದೆ ಎಂದು ಪ್ರಶ್ನಿಸಿದರು.


Spread the love

LEAVE A REPLY

Please enter your comment!
Please enter your name here