ಬ್ರ್ಯಾಂಡ್ ಬೆಂಗಳೂರು ಮಾಡಲು ಆಗದವರು‌ ಗ್ರೇಟರ್ ಬೆಂಗಳೂರು ಮಾಡ್ತಾರಾ?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

0
Spread the love

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಮಾಡಲು ಆಗದವರು‌ ಗ್ರೇಟರ್ ಬೆಂಗಳೂರು ಮಾಡ್ತಾರಾ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಬಿಎಂಪಿ ಚುನಾವಣೆ ಅಗಬೇಕಿತ್ತು‌.

Advertisement

ಹೀಗೆ ಚುನಾವಣೆ ಮುಂದೂಡೋದ್ರಿಂದ ಪ್ರಜಾಪ್ರಭುತ್ವಕ್ಕೆ ಚ್ಯುತಿ ಬರುತ್ತದೆ. ಬ್ರ್ಯಾಂಡ್ ಬೆಂಗಳೂರು ಅಂದೋರು ಈಗ ಯಾಕೆ ಗ್ರೇಟರ್ ಬೆಂಗಳೂರು ಅಂತಿದ್ದೀರಾ. ಬ್ರ್ಯಾಂಡ್ ಬೆಂಗಳೂರು ಮಾಡಲು ಆಗದವರು‌ ಗ್ರೇಟರ್ ಬೆಂಗಳೂರು ಮಾಡ್ತಾರಾ ಎಂದು ಪ್ರಶ್ನಿಸಿದರು.

ಇದು ಸರಿಯಾದ ಕ್ರಮ ಅಲ್ಲ. ಗ್ರೇಟರ್ ಬೆಂಗಳೂರು ಮಾಡಿ ಕೆಂಪೇಗೌಡ ಕಟ್ಟಿದ ಬೆಂಗಳೂರನ್ನ ಛಿದ್ರ ಮಾಡೋಕೆ ಕಾಂಗ್ರೆಸ್ ಹೊರಟಿದೆ. ಬೆಂಗಳೂರನ್ನ ಒಗ್ಗಟ್ಟಾಗಿ ಇಡೋ ಕೆಲಸ ಆಗಬೇಕು. ವಿಚಿತ್ರಕಾರಿ ಜನ ಬೆಂಗಳೂರಿಗೆ ಬಂದು ಹಾಳು ಮಾಡಿದ್ದು ಆಯ್ತು. ಬೆಂಗಳೂರನ್ನ ಸುಭದ್ರಗೊಳಿಸಬೇಕು. ಅದು ಬಿಟ್ಟು 6, 7 ಭಾಗ ಮಾಡ್ತೀವಿ. 6 ಮೇಯರ್ ಮಾಡ್ತೀವಿ ಅನ್ನೋದು ಸರಿಯಲ್ಲ. ಗ್ರೇಟರ್ ಬೆಂಗಳೂರಿಗೆ ನಮ್ಮ ವಿರೋಧ ಇದೆ ಎಂದರು‌.


Spread the love

LEAVE A REPLY

Please enter your comment!
Please enter your name here