ಬೆಂಗಳೂರು: ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ಧಿ ಹೇಳಲು ಸಾಧ್ಯವೇ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ವಿರೋಧ ಪಕ್ಷಗಳ ನಾಯಕರ ಟ್ವೀಟ್ಗಳನ್ನು ನೋಡಿದೆ. ಪ್ರಕೃತಿಗೆ ನಾವು ಕಡಿವಾಣ ಹಾಕಿ ಬುದ್ಧಿ ಹೇಳಲು ಸಾಧ್ಯವೇ? ಚಂಡಮಾರುತದ ಪರಿಣಾಮದಿಂದ ಅನಿರೀಕ್ಷಿತವಾಗಿ ಮಳೆ ಸುರಿದಿದ್ದು,
Advertisement
ಇನ್ನು ಹೆಚ್ಚಿನ ಮಳೆ ಬಂದರೂ ಅದನ್ನು ನಿಭಾಯಿಸಲು ಸರ್ಕಾರ ಹಾಗೂ ಜನರು ಸಮರ್ಥರಿದ್ದೇವೆ ಎಂದು ತಿಳಿಸಿದರು.ಇನ್ನೂ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಕಾರ್ಯಕ್ರಮದಿಂದ ಮರಳಿದ ನಂತರ ಇಂದು ಸಂಜೆ ಪೊಲೀಸ್ ಇಲಾಖೆ, ಬಿಬಿಎಂಪಿ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ಮಾಡುತ್ತೇನೆ ಎಂದು ಹೇಳಿದರು.