HomePolitics Newsಕೂಡಲೇ ಮೂರು ಕ್ಷೇತ್ರಗಳ ಉಪಚುನಾವಣೆ ರದ್ದು ಮಾಡಿ: ಎಎಪಿ ಆಗ್ರಹ

ಕೂಡಲೇ ಮೂರು ಕ್ಷೇತ್ರಗಳ ಉಪಚುನಾವಣೆ ರದ್ದು ಮಾಡಿ: ಎಎಪಿ ಆಗ್ರಹ

For Dai;y Updates Join Our whatsapp Group

Spread the love

ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಎಲ್ಲಾ ಪಕ್ಷಗಳು ಕೋಟಿ ಕೋಟಿ ಹಣ ಖರ್ಚು ಮಾಡುತ್ತಿದ್ದು, ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ, ಕೂಡಲೇ ಕೇಂದ್ರ ಚುನಾವಣಾ ಆಯೋಗ ಈ ಮೂರು ಕ್ಷೇತ್ರಗಳ ಉಪಚುನಾವಣೆ ರದ್ದು ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಆಗ್ರಹಿಸಿದ್ದಾರೆ.

ನಗರದ ಆಮ್ ಆದ್ಮಿ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇಬ್ಬರು ಮುಖ್ಯಮಂತ್ರಿಗಳು ತಮ್ಮ ಮಕ್ಕಳನ್ನು ರಾಜಕೀಯವಾಗಿ ಬೆಳೆಸಲು ಉಪಚುನಾವಣೆ ನಡೆಯುವಂತೆ ಮಾಡಿದ್ದಾರೆ. ಶಿಗ್ಗಾಂವಿಯಲ್ಲಿ ಬಸವರಾಜ ಬೊಮ್ಮಾಯಿ ಮತ್ತು ಚನ್ನಪಟ್ಟಣದಲ್ಲಿ ಹೆಚ್.‌ಡಿ. ಕುಮಾರಸ್ವಾಮಿ ತಮ್ಮ ಮಕ್ಕಳನ್ನು ಗೆಲ್ಲಿಸಲು ಶತಪ್ರಯತ್ನ ಮಾಡುತ್ತಿದ್ದು ಹಣವನ್ನು ನೀರಿನಂತೆ ಖರ್ಚು ಮಾಡುತ್ತಿದ್ದಾರೆ ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಳೆದ ಮೂರು ನಾಲ್ಕು ತಿಂಗಳಿನಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ಠಿಕಾಣಿ ಹೂಡಿ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಬಂದಿದ್ದರು. ಒಕ್ಕಲಿಗ ಸಮುದಾಯ ಪ್ರಬಲವಾಗಿರುವ ಕ್ಷೇತ್ರದಲ್ಲಿ ಗೆದ್ದು, ಒಕ್ಕಲಿಗ ಸಮುದಾಯದ ನಾಯಕ ಎನಿಸಿಕೊಳ್ಳಬೇಕು ಎಂದು ಗೆಲುವಿಗಾಗಿ ಎಲ್ಲಾ ಅಕ್ರಮಗಳನ್ನು ಮಾಡಲಾಗುತ್ತಿದೆ ಎಂದರು.

ಮೂರು ಕ್ಷೇತ್ರಗಳನ್ನು ಗೆಲ್ಲಲು ಎಲ್ಲಾ ಸಚಿವರು, ಶಾಸಕರು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯದ ಆಡಳಿತ ಯಂತ್ರ ಕುಸಿದಿದೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಡಾ. ಮುಖ್ಯಮಂತ್ರಿ ಚಂದ್ರು ಒಂದು ತಿಂಗಳ ಮೊದಲೇ ಉಪಚುನಾವಣೆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ ಅಭಿವೃದ್ಧಿ ಕಡೆ ಗಮನ ಹರಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು. ಆದರೆ ಈ ಸರ್ಕಾರಕ್ಕೆ ಜನರ ಹಿತ ಬೇಕಾಗಿಲ್ಲ ಎಂಬುದನ್ನು ಉಪಚುನಾವಣೆ ಮೂಲಕ ಸಾಬೀತು ಮಾಡಿದೆ ಎಂದರು.

ಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಲ್ಲಿ ಅಕ್ರಮ ಮಿತಿಮೀರಿದೆ. ಹಣ, ಹೆಂಡ, ಉಡುಗೊರೆಗಳನ್ನು ಎಗ್ಗಿಲ್ಲದೆ ಕೊಡಲಾಗುತ್ತಿದೆ. ಕೋಟಿ ಕೋಟಿ ಹಣವನ್ನು ಖರ್ಚು ಮಾಡಲಾಗುತ್ತಿದೆ. ಮತದಾರರಿಗೆ ಧರ್ಮ ಗ್ರಂಥಗಳ ಜೊತೆ ಹಣವನ್ನು ಕೊಟ್ಟು ಆಣೆ, ಪ್ರಮಾಣ ಮಾಡಿಸಿಕೊಳ್ಳಲಾಗುತ್ತಿದೆ. ಇಷ್ಟೆಲ್ಲಾ ಆಗುತ್ತಿದ್ದರು ಚುನಾವಣಾ ಆಯೋಗ ಏನು ಮಾಡುತ್ತಿದೆ ಎಂದು ಪ್ರಶ್ನೆ ಮಾಡಿದರು.

ಈ ಮೂರು ಕ್ಷೇತ್ರಗಳಲ್ಲಿ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಎಷ್ಟು ಪ್ರಕರಣ ದಾಖಲಾಗಿವೆ ಎನ್ನುವುದನ್ನು ರಾಜ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ ಬಹಿರಂಗಪಡಿಸಬೇಕು. ಇಷ್ಟೆಲ್ಲಾ ಅಕ್ರಮ ನಡೆಯುತ್ತಿರುವುದು ನಿಮ್ಮ ಗಮನಕ್ಕೆ ಬಂದಿಲ್ಲವಾ, ಮೂರು ಕ್ಷೇತ್ರಗಳಲ್ಲಿ ಚುನಾವಣಾ ಅಧಿಕಾರಿಗಳು ಏನು ಮಾಡುತ್ತಿದ್ದಾರೆ? ನಿಮಗೆ ಚುನಾವಣಾ ಅಕ್ರಮ ನಿಲ್ಲಿಸಲು ಸಾಧ್ಯವಾಗದಿದ್ದರೆ, ನ್ಯಾಯಯುತವಾಗಿ ಚುನಾವಣೆಯನ್ನು ನಡೆಸಲು ಆಗದಿದ್ದರೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು, ಇಲ್ಲಿ ಗೂಂಡಾ ಪ್ರವೃತ್ತಿ ರಾಜಕಾರಣಿಗಳಿದ್ದು, ನಮಗೆ ನ್ಯಾಯಯುತವಾಗಿ ಚುನಾವಣೆ ಮಾಡಲು ಆಗುತ್ತಿಲ್ಲ ಎಂದು ಹೇಳಲಿ. ಉಪಚುನಾವಣೆಯನ್ನು ಕೂಡಲೇ ರದ್ದು ಮಾಡಲಿ ಎಂದು ಆಗ್ರಹಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!