ಅಪಘಾತದ ನಂತರ ಕಾರ್ ಚಾಲಕಿ ಪರಾರಿ…..
ಶಿರಹಟ್ಟಿ: ಕಾರ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.
ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಬಳಿ ಈ ಘಟನೆ ಜರುಗಿದ್ದು, ಗ್ರಾಮ ಪಂಚಾಯತಿ ಸದಸ್ಯ, ದೇವಿಹಾಳ ಗ್ರಾಮದ ಯಲ್ಲಪ್ಪ ಮಕರಬ್ಬಿ (48) ಸ್ಥಳದಲ್ಲೇ ಮೃತಪಟ್ಟ ದುರ್ಧೈವಿಯಾಗಿದ್ದು, ಮತ್ತೊಬ್ಬ ಸವಾರ ಬಸವೆಣ್ಣೆಪ್ಪ (50)ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರ್ ಶಿರಹಟ್ಟಿಯಿಂದ ಬೆಳ್ಳಟ್ಟಿ ಗ್ರಾಮದತ್ತ ಹೊರಟಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ಬಳಿಕ ಚಾಲಕಿ ಸ್ಥಳದಲ್ಲೇ ಕಾರ್ ಬಿಟ್ಟು ಪರಾರಿಯಾಗಿದ್ದಾರೆ.
ಸುದ್ದಿ ತಿಳಿದು ಶಿರಹಟ್ಟಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.