HomeCrime Newsಕಾರ್- ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಗ್ರಾಮ ಪಂಚಾಯತಿ ಸದಸ್ಯ ಸಾವು, ಮತ್ತೊಬ್ಬ ಗಾಯ

ಕಾರ್- ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಗ್ರಾಮ ಪಂಚಾಯತಿ ಸದಸ್ಯ ಸಾವು, ಮತ್ತೊಬ್ಬ ಗಾಯ

Spread the love

ಅಪಘಾತದ ನಂತರ ಕಾರ್ ಚಾಲಕಿ ಪರಾರಿ…..

ಶಿರಹಟ್ಟಿ: ಕಾರ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜರುಗಿದೆ.

ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಬಳಿ ಈ ಘಟನೆ ಜರುಗಿದ್ದು, ಗ್ರಾಮ ಪಂಚಾಯತಿ ಸದಸ್ಯ, ದೇವಿಹಾಳ ಗ್ರಾಮದ ಯಲ್ಲಪ್ಪ ಮಕರಬ್ಬಿ (48) ಸ್ಥಳದಲ್ಲೇ ಮೃತಪಟ್ಟ ದುರ್ಧೈವಿಯಾಗಿದ್ದು, ಮತ್ತೊಬ್ಬ ಸವಾರ ಬಸವೆಣ್ಣೆಪ್ಪ (50)ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರ್ ಶಿರಹಟ್ಟಿಯಿಂದ ಬೆಳ್ಳಟ್ಟಿ ಗ್ರಾಮದತ್ತ ಹೊರಟಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಪಘಾತದ ಬಳಿಕ ಚಾಲಕಿ ಸ್ಥಳದಲ್ಲೇ ಕಾರ್ ಬಿಟ್ಟು ಪರಾರಿಯಾಗಿದ್ದಾರೆ.

ಸುದ್ದಿ ತಿಳಿದು ಶಿರಹಟ್ಟಿ ಪೊಲೀಸರು ‌ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!