ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು: ಚಾಲಕ ಪಾರು

0
Spread the love

ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಯಲ್ಲಾಪುರ ಗೇಟ್ ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ತುಮಕೂರಿನಿಂದ ಹೊಸದುರ್ಗದ ಕಡೆ ಸಾಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕಾರಿನ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,

Advertisement

ಕೂಡಲೇ ಕಾರಿನಿಂದ ಚಾಲಕ ಇಳಿದಿದ್ದಾರೆ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ.

ಹೇಮಂತ್ ಎಂಬವರಿಗೆ ಸೇರಿದ ಡಸ್ಟರ್ ಕಾರು ಬೆಂಕಿಗಾಹುತಿಯಾಗಿದೆ. ತುಮಕೂರು ಕಡೆಯಿಂದ ಹೊಸದುರ್ಗದ ಬಳಿಯ ಮನೆಗೆ ತೆರಳುವಾಗ ಘಟನೆ ನಡೆದಿದೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


Spread the love

LEAVE A REPLY

Please enter your comment!
Please enter your name here