HomeCrime Newsಪಾದಚಾರಿಗೆ ಕಾರ್ ಡಿಕ್ಕಿ; ಸ್ಥಳದಲ್ಲಿಯೇ ಸಾವು, ಟೈರ್ ಗೆ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ, ರಸ್ತೆತಡೆ

ಪಾದಚಾರಿಗೆ ಕಾರ್ ಡಿಕ್ಕಿ; ಸ್ಥಳದಲ್ಲಿಯೇ ಸಾವು, ಟೈರ್ ಗೆ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ, ರಸ್ತೆತಡೆ

Spread the love

ಸ್ಥಳಕ್ಕೆ ಸಂಸದ, ಶಾಸಕರ ಭೇಟಿಗೆ ಗ್ರಾಮಸ್ಥರ ಪಟ್ಟು……

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜರುಗಿದೆ.

ತಾಲೂಕಿನ ಶಿರಗುಪ್ಪಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಎಂಟು ಗಂಟೆಗೆ ನಡೆದಿದ್ದು, ಘಟನೆಯಲ್ಲಿ ಶಿರಗುಪ್ಪಿ ಗ್ರಾಮದ ಬಸಪ್ಪ (45) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಘಟನೆಯ ನಂತರ ಆಕ್ರೋಶಗೊಂಡ ಗ್ರಾಮಸ್ಥರು, ರಸ್ತೆ ತಡೆ ನಡೆಸುತ್ತಿದ್ದು, ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಸಂಸದರು ಹಾಗೂ ಶಾಸಕರು ಭೇಟಿ ನೀಡುವಂತೆ ಪಟ್ಟು ಹಿಡಿದಿದ್ದು, ಆರಂಭದಲ್ಲಿ ಪೊಲೀಸರ ಮನವೊಲಿಕೆಗೆ ಜಗ್ಗಲಿಲ್ಲ. ಸಂಸರ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.

ಡಿಕ್ಕಿ ಹೊಡೆದ ಕಾರ್ ಹುಬ್ಬಳ್ಳಿಯಿಂದ ಗದಗ ಕಡೆ ಹೋಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಗ್ರಾಮಸ್ಥರ ಮನವೊಲಿಸಲು ಹರಸಾಹಸ ಪಟ್ಟರು. ನಂತರ ಸಂಸದ ಜೋಶಿ ಅವರು ದೂರವಾಣಿ ಮೂಲಕ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ಕರೆಯಲಾಗುವುದು ಎಂದು ಭರವಸೆ ಕೊಟ್ಟ ನಂತರ ಗ್ರಾಮಸ್ಥರು ಪ್ರತಿಭಟನೆ ಹಿಂದಕ್ಕೆ ಪಡೆದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದ ವಾಹನಗಳು ಸಾಲಾಗಿ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿತ್ತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!