ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ವಿರಾಜಪೇಟೆ ಕರ್ನಾಟಕ ಸಂಘದ ಸದಸ್ಯ ಸಾವು!

0
Spread the love

ಮಡಿಕೇರಿ:- ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಹಿನ್ನೆಲೆ ವಿರಾಜಪೇಟೆ ಕರ್ನಾಟಕ ಸಂಘದ ಸದಸ್ಯ ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷರಾಗಿದ್ದ 64 ವರ್ಷದ ಗಣೇಶ್ ಸಾವನ್ನಪ್ಪಿದ ದುರ್ದೈವಿ ಎನ್ನಲಾಗಿದೆ. ಗಣೇಶ್ ಅವರು ತಮ್ಮ ಪುತ್ರನನ್ನು ಮಂಗಳೂರಿನ ಏರ್ಪೋರ್ಟ್ಗೆ ಬಿಟ್ಟು ಹಿಂತಿರುಗಿ ಬರುತ್ತಿದ್ದ ಸಂದರ್ಭ ನಡೆದ ಅಪಘಾತ ನಡೆದಿದೆ.

ಘಟನೆಯಲ್ಲಿ ಗಣೇಶ್ ಎದೆ ಭಾಗಕ್ಕೆ ಗಂಭೀರವಾಗಿ ಗಾಯವಾಗಿತ್ತು. ಅವರನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದ ಗಣೇಶ್ ಅವರ ಪುತ್ರಿ, ಅಳಿಯ ಮತ್ತು ಮರ್ತೋವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here