ಹಾವೇರಿ: ಜಿಲ್ಲೆಯ ಹಿರೇಕೆರೂರು ತಾಲೂಕಿನ ಚೆನ್ನಹಳ್ಳಿ ತಾಂಡಾ ಬಳಿ ವಿಚಿತ್ರ ಪ್ರೇಮ ಪ್ರಕರಣವೊಂದು ಅಪಘಾತದ ಮೂಲಕ ಹೊಸ ತಿರುವು ಪಡೆದುಕೊಂಡಿದೆ.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಇರ್ಫಾನ್ ಮತ್ತು ಹಿರೇಕೆರೂರು ಮೂಲದ ಯುವತಿ ಪರಸ್ಪರ ಪ್ರೀತಿಸಿ ಮದುವೆಯಾಗಲು ತೀರ್ಮಾನಿಸಿದ್ದರು. ಯುವತಿ ಜಾತ್ರೆಗಾಗಿ ಊರಿಗೆ ಬಂದಿದ್ದ ಸಂದರ್ಭದಲ್ಲಿ, ಇರ್ಫಾನ್ ತನ್ನ ಸ್ನೇಹಿತರೊಂದಿಗೆ ಬಾಡಿಗೆ ಕಾರಿನಲ್ಲಿ ತೆರಳಿ ಆಕೆಯನ್ನು ಕರೆದುಕೊಂಡು ಹೋಗಲು ಮುಂದಾಗಿದ್ದ.
ಬೆಂಗಳೂರು ಕಡೆ ಪ್ರಯಾಣಿಸುವಾಗ ಕಾರು ವೇಗವಾಗಿ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಇರ್ಫಾನ್ ಹಾಗೂ ಇಬ್ಬರು ಸ್ನೇಹಿತರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆದರೆ ಯುವತಿ ಮಾತ್ರ ಗಾಯಗಳಿಲ್ಲದೆ ಪಾರಾಗಿ, ಸ್ಥಳದಲ್ಲಿದ್ದ ಜನರಿಂದ ಲಿಫ್ಟ್ ಪಡೆದು ಬಳಿಕ ಬಸ್ ಮೂಲಕ ಬೆಂಗಳೂರಿಗೆ ತೆರಳಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ಕುರಿತು ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



