ಚಿಕ್ಕೋಡಿ:- ಇಲ್ಲಿನ ಹಾರೂಗೇರಿ ಪಟ್ಟಣದ ಬಳಿ ಪಂಢರಪುರಕ್ಕೆ ಪಾದಯಾತ್ರೆ ಹೊರಟವರ ಮೇಲೆ ಕಾರು ಹರಿದ ಪರಿಣಾಮ 6 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ಜರುಗಿದೆ.
Advertisement
ರಾಯಬಾಗ ತಾಲೂಕಿನ ಹಿಡಕಲ್ ಮೂಲದ ಭಕ್ತರು, ಅಥಣಿ ಮಾರ್ಗವಾಗಿ ಪಾದಯಾತ್ರೆ ತೆರಳುತ್ತಿದ್ದರು. ಈ ವೇಳೆ ಕಾರು ಚಾಲಕನ ಅಜಾಗರೂಕ ಚಾಲನೆಯಿಂದ 6 ಯುವಕರ ಮೇಲೆ ಕಾರು ಹರಿದಿದೆ. ಗಂಭೀರವಾಗಿ ಗಾಯಗೊಂಡ ಯುವಕರನ್ನು ಸ್ಥಳೀಯ ಹಾರೂಗೇರಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಾರೂಗೇರಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.