ರಸ್ತೆಯಲ್ಲಿ ಹೋಗುತ್ತಿದ್ದ ಯುವಕನ ಮೇಲೆ ಮರದ ಕೊಂಬೆ ಬಿದ್ದ ಕೇಸ್: ಗಾಯಾಳು ಬ್ರೈನ್ ಡೆಡ್!

0
Spread the love

ಬೆಂಗಳೂರು:- ಮೊನ್ನೆ-ಮೊನ್ನೆ ತಾನೇ ತನ್ನದಲ್ಲದ ತಪ್ಪಿಗೆ ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದ ಯುವಕನ ಬ್ರೈನ್ ಡೆಡ್ ಆಗಿದೆ. ಇದೇ ಕಳೆದ ಜೂನ್‌ 15 ರಂದು ಬಸವನಗುಡಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್‌ನ ಬ್ರೈನ್‌ ಡೆಡ್‌ ಆಗಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

Advertisement

ಗಾಯಗೊಂಡಿದ್ದ ಅಕ್ಷಯ್‌ (29)ಗೆ ವೈದ್ಯರು ಶಸ್ತ್ರ ಚಿಕಿತ್ಸೆ ನೆರವೇರಿಸಿದ್ದರು. ಆದ್ರೆ ಶಸ್ತ್ರಚಿಕಿತ್ಸೆ ನಡೆದು 60 ತಾಸು ಕಳೆದ ಬಳಿಕವೂ ಮೆದುಳು ಸ್ಪಂದಿಸದೇ ಇರುವುದರಿಂದ ವೈದ್ಯರು ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಪರಿಗಣಿಸಿರುವುದಾಗಿ ಹೇಳಿದ್ದಾರೆ. ಸಹಜವಾಗಿ ಶಸ್ತ್ರಚಿಕಿತ್ಸೆ ಮುಗಿದು 48 ಗಂಟೆಗಳ ನಂತರವು ಮೆದುಳು ಸ್ಪಂದಿಸದೇ ಇದ್ದರೆ ಮೆದುಳು ನಿಷ್ಕ್ರಿಯ ಎಂದು ಪರಿಗಣಿಸಲಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಆದ್ರೆ ಅಕ್ಷಯ್‌ ಕೇಸ್‌ನಲ್ಲಿ 60 ಗಂಟೆ ಕಳೆದರೂ ಮೆದುಳು ಸ್ಪಂದಿಸದೇ ಇರುವ ಕಾರಣ ಮೆದುಳು ನಿಷ್ಕ್ರಿಯವಾಗಿದೆ ಎಂದು ಕುಟುಂಬಸ್ಥರಿಗೆ ವೈದ್ಯರು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here