ಮಹಿಳೆಗೆ ನಾಯಿ ಕಚ್ಚಿದ ಪ್ರಕರಣ: ಕೊನೆಗೂ ವಿಚಾರಣೆಗೆ ಹಾಜರಾದ ನಟ ದರ್ಶನ್..!

0
Spread the love

ಬೆಂಗಳೂರು: ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೊನೆಗೂ ನಟ ದರ್ಶನ್ ಆರ್.ಆರ್.ನಗರ ಪೊಲೀಸ್‍ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

Advertisement

ದರ್ಶನ್ ಮೂರು ದಿನದ ಒಳಗೆ ಸಿಸಿಟಿವಿ ಫೂಟೇಜ್ ಜೊತೆ ವಿಚಾರಣೆಗೆ ಬರಬೇಕೆಂದು ಪೊಲೀಸರು ನೋಟಿಸ್ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ  ಕೊನೆಗೂ ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟ ದರ್ಶನ್ ತನಿಖಾಧಿಕಾರಿ ಇನ್ಸ್‌ಪೆಕ್ಟರ್  ಶಿವಕುಮಾರ್ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಏನಿದು ಪ್ರಕರಣ?

ಈ ಹಿಂದೆ ದರ್ಶನ್ ವಿರುದ್ಧ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.


Spread the love

LEAVE A REPLY

Please enter your comment!
Please enter your name here