ವಿಜಯಪುರ:- ಸಿಎಂ ಕುರ್ಚಿ ಭದ್ರ ಮಾಡಿಕೊಳ್ಳಲು ಸಿದ್ದರಾಮಯ್ಯ ಜಾತಿಗಣತಿ ನಾಟಕ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.
Advertisement
ಜಾತಿಗಣತಿ ವಿಚಾರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನ ಆಗಲಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿಜಯೇಂದ್ರ, ಜಾತಿಗಣತಿ ಇಂದು ಮಾತ್ರವಲ್ಲ ಇನ್ನೂ ನಾಲ್ಕು ವರ್ಷವಾದ್ರೂ ತೆಗೆದುಕೊಳ್ಳುವುದಿಲ್ಲ. ರಾಜ್ಯದ ಸಿಎಂಗೆ ಜಾತಿ ಜನಗಣತಿ ವಿಚಾರವಾಗಿ ಪ್ರಾಮಾಣಿಕ ಕಳಕಳಿ ಇಲ್ಲ. ಹಿಂದುಳಿದ ಸಮುದಾಯಗಳಿಗೆ ನ್ಯಾಯ ಕೊಡುವ ಇಚ್ಛಾಶಕ್ತಿ ಇಲ್ಲ.
ಸಮಾಜಗಳ ನಡುವೆ ಹುಡುಗಾಟಿಕೆ ಮಾಡುತ್ತಿದ್ದಾರೆ. ಸಿಎಂ ಈ ಹುಡುಗಾಟವನ್ನ ಬಿಡಬೇಕು. ತಮ್ಮ ಸಿಎಂ ಸ್ಥಾನ ಭದ್ರಗೊಳಿಸುವ ಸಲುವಾಗಿ ಈ ತರಹದ ಹುಡುಗಾಟಿಕೆ ಸರಿಯಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.