ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ : ಬಸವೇಶ್ವರ ಜಯಂತಿ ಅಂಗವಾಗಿ ಇಲ್ಲಿಯ ವಿವಿಧ ಸಂಘಟನೆಗಳಿಂದ ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.
Advertisement
ಮಲ್ಲಿಕಾರ್ಜುನ ಭಜನಾ ಸಂಘದ ಕಾರ್ಯಕರ್ತರು ಬಸವೇಶ್ವರರ ತತ್ವಾದರ್ಶಗಳ ಹಾಡುಗಳನ್ನು ಹಾಡುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ರೈತನ ಬೆನ್ನೆಲುಬಾಗಿರುವ ಎತ್ತುಗಳನ್ನು ಮೆರವಣಿಗೆ ಮಾಡಿದರು. ಎತ್ತುಗಳಿಗೆ ಬಲೂನಗಳು ಹಾಗೂ ಬಣ್ಣದ ಬಟ್ಟೆಗಳನ್ನು ಹಾಕಿ ರೈತರು ಸಂಭ್ರಮಸಿದರು. ವಿವಿಧ ಓಣಿಯ ರೈತರು ಗ್ರಾಮದ ಹಾಲಗೊಂಡ ಬಸವೇಶ್ವರ ದೇವಸ್ಥಾನದವರೆಗೆ ತಮ್ಮ ಎತ್ತುಗಳನ್ನು ಮೆರವಣಿಗೆ ಮಾಡಿ ವಿಶೇಷ ಪೂಜೆ ಸಲ್ಲಿಸಿಸಿದರು.