ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಬುಧವಾರ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ತಹಸೀಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ. ತುಂಬರಮಟ್ಟಿ, ಎಚ್.ವೈ. ಸಂದಕದ, ರವಿ ಗುಂಜೀಕರ್, ವಿದ್ಯಾಧರ ದೊಡ್ಡಮನಿ, ಚಿನ್ನಪ್ಪ ವಡ್ಡಟ್ಟಿ, ವೆಂಕಟೇಶ ಗೆಜ್ಜಿ, ಆಂಜನೇಯ ಕಟಗಿ, ನಾಗರಡ್ಡಿ ನಿಡಗುಂದಿ, ಸಹದೇವ ಕೋಟಿ, ರಾಘವೇಂದ್ರ ವಿ.ಎಸ್, ತಿಮ್ಮಣ್ಣ ಡೋಣಿ, ವಿಜಯ ಗಿಂಜಿ, ರವಿ ಕೋಟಿ ಸೇರಿದಂತೆ ಗಣ್ಯರು, ಹಿರಿಯರು ಇದ್ದರು.



