ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಪ್ರಮುಖ ಕಾರಣ: ಮಾಜಿ ಸಚಿವ ದೇಶಪಾಂಡೆ ಆರೋಪ

0
Spread the love

ಬೆಂಗಳೂರು: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಪ್ರಮುಖ ಕಾರಣ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ದೇಶಪಾಂಡೆ ಆರೋಪಿಸಿದ್ದಾರೆ. ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ ಮಾಡುತ್ತಿರುವ ವಿಚಾರಕ್ಕೆ ನಗರದಲ್ಲಿ ಮಾತನಾಡಿದ ಅವರು,

Advertisement

ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಅಹೋರಾತ್ರಿ ಧರಣಿ ಮಾಡುವುದು ಅವರ ಇಷ್ಟ. ಆದರೆ, ಅದರಲ್ಲಿ ಯಶಸ್ಸು ಆಗುವುದಿಲ್ಲ. ಬಿಜೆಪಿ ಅಧಿಕಾರದಲ್ಲಿ ಬೆಲೆ ಏರಿಕೆ ಮಾಡಿರಲಿಲ್ವಾ? ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ನೀತಿಗಳೇ ಪ್ರಮುಖ ಕಾರಣ ಎಂದರು.

ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ. ಇದಕ್ಕೆ ಕಾರಣ ಮೇವಿನ ಬೆಲೆ ಜಾಸ್ತಿ ಆಗಿರುವುದು. ಬೆಲೆ ಏರಿಕೆ ಆದಾಗ ಸ್ವಲ್ಪ ಅಡ್ಜೆಸ್ಟ್ ಮಾಡಿಕೊಳ್ಳಬೇಕು. ಹಣ ಎಲ್ಲಿಂದ ತರಲು ಆಗುತ್ತದೆ. ಸರ್ಕಾರ ಸ್ವಲ್ಪ ಬೆಲೆ ಏರಿಕೆ ಮಾಡಿದೆ ನಿಜ. ಹಾಗಂತ ಜನರನ್ನ ಲೂಟಿ ಮಾಡಲು ಮಾಡಿದೆ ಎಂದು ಹೇಳುವುದು ಸರಿಯಲ್ಲ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here