ಚಿಕ್ಕಮಗಳೂರು:- ಚಿಕ್ಕಮಗಳೂರು ತಾಲೂಕಿನ ಚಿಕ್ಕನಹಳ್ಳಿಯಲ್ಲಿ ಡೆತ್ ನೋಟ್ ಬರೆದಿಟ್ಟು ಸೆಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಮಧು(28) ನೇಣಿಗೆ ಶರಣಾದ ಯುವತಿ. IB ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮೃತ ಮಧು, ಇತ್ತೀಚೆಗೆ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ವರ್ಗಾವಣೆಯಾಗಿತ್ತು. ನನ್ನ ಸಾವಿಗೆ ಅನಾರೋಗ್ಯ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಚಿಕ್ಕನಹಳ್ಳಿಯ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ನನ್ನ ಸಾವಿಗೆ ಅನಾರೋಗ್ಯ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ.



