ಬೆಂಗಳೂರು:- ಬೆಳಗಾವಿ ಮಂದಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಒಪ್ಪಿಗೆ ಕೊಟ್ಟಿದ್ದು, ಸಚಿವ ವಿ. ಸೋಮಣ್ಣ ಅವರು ಈ ಸುದ್ದಿಯನ್ನು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಸಚಿವ ಸೋಮಣ್ಣ ಮಾಡಿರುವ ಟ್ವೀಟ್ ನಲ್ಲಿ ಏನಿದೆ!?
“ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಬೇಕೆಂದು ಮಾನ್ಯ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಉತ್ತರ ಕರ್ನಾಟಕ ಭಾಗದ ಜನದಟ್ಟಣೆಯನ್ನು ಅರಿತು ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಬೆಳಗಾವಿ ನಡುವೆ ನೂತನ ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿದ್ದಾರೆ. ಈ ರೈಲು ಸಂಚಾರದ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಶೀಘ್ರವೇ ತಿಳಿಸಲಾಗುವುದು” ಎಂದಿದ್ದಾರೆ.
ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲಿನ ಸಂಚಾರಕ್ಕೆ ಅನುಮತಿ ನೀಡಿರುವ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಗೆ ಹಾಗೂ ಅಶ್ವಿನಿ ವೈಷ್ಣವ್ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.