ಚಾಮರಾಜನಗರ:- ಜಮೀನಿನ ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಮೂರು ವರ್ಷದ ಮರಿ ಗಂಡಾನೆ ಸಾವನ್ನಪ್ಪಿದ ಘಟನೆ ಬಂಡೀಪುರ ಕಾಡಂಚಿನ ಜಕ್ಕಳ್ಳಿ ಗ್ರಾಮದ ಜಮೀನೊಂದರಲ್ಲಿ ಜರುಗಿದೆ.
ಶರಿಯರ್ ಖಾನ್ ಎಂಬುವರಿಗೆ ಸೇರಿದ ಜಮೀನಿನ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ಕಾಡಿನಿಂದ ಮೇವು ಅರಸಿ ಬಂದ ಆನೆ ಮರಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ.
ಜಮೀನು ಮಾಲೀಕರು ಹಾಗು ಜಮೀನು ಗುತ್ತಿಗೆ ಪಡೆದಿದ್ದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.



