ಚಾಮರಾಜನಗರ: ವಿದ್ಯುತ್ ಸ್ಪರ್ಶಿಸಿ ಮರಿ ಗಂಡಾನೆ ಸಾವು!

0
Spread the love

ಚಾಮರಾಜನಗರ:- ಜಮೀನಿನ ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಮೂರು ವರ್ಷದ ಮರಿ ಗಂಡಾನೆ ಸಾವನ್ನಪ್ಪಿದ ಘಟನೆ ಬಂಡೀಪುರ ಕಾಡಂಚಿನ ಜಕ್ಕಳ್ಳಿ ಗ್ರಾಮದ ಜಮೀನೊಂದರಲ್ಲಿ ಜರುಗಿದೆ.

Advertisement

ಶರಿಯರ್ ಖಾನ್ ಎಂಬುವರಿಗೆ ಸೇರಿದ ಜಮೀನಿನ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ನೀಡಲಾಗಿತ್ತು. ಕಾಡಿನಿಂದ ಮೇವು ಅರಸಿ ಬಂದ ಆನೆ ಮರಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದೆ.

ಜಮೀನು ಮಾಲೀಕರು ಹಾಗು ಜಮೀನು ಗುತ್ತಿಗೆ ಪಡೆದಿದ್ದವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here