ಚಾಮರಾಜನಗರ ಆಕ್ಸಿಜನ್ ದುರಂತ: ಶೀಘ್ರದಲ್ಲೇ ಸಂತ್ರಸ್ತರಿಗೆ ಸರ್ಕಾರಿ ಕೆಲಸ – ಸಚಿವ ವೆಂಕಟೇಶ್!

0
Spread the love

ಚಾಮರಾಜನಗರ:- ಈ ಹಿಂದೆ ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ್ದ ಮೃತರ ಕುಟುಂಬಸ್ಥರಲ್ಲಿ ಒಬ್ಬರಿಗೆ ಶೀಘ್ರದಲ್ಲೇ ಸರ್ಕಾರಿ ನೌಕರಿ ಕೊಡಿಸಲಾಗುತ್ತದೆ ಎಂದು ಸಚಿವ ವೆಂಕಟೇಶ್ ಹೇಳಿದ್ದಾರೆ

Advertisement

ಪರಿಹಾರ ತಾರತಮ್ಯ ವಿಚಾರದ ಕುರಿತು ನಗರದಲ್ಲಿ ಮಾತನಾಡಿದ ಅವರು, ಆಕ್ಸಿಜನ್ ದುರಂತ ಸಂತ್ರಸ್ತರಿಗೆ ಅತಿ ಶೀಘ್ರದಲ್ಲೇ ಖಾಯಂ ನೇಮಕಾತಿ ಮಾಡುತ್ತೇವೆ. ಹಿಂದೆ ಆಕ್ಸಿಜನ್ ದುರಂತ ನಡೆದಾಗ ಬಿಜೆಪಿ ಸರ್ಕಾರವಿತ್ತು, ಅವರು ಸರಿಯಾದ ರೀತಿ ಪರಿಹಾರ ಕೊಟ್ಟಿಲ್ಲ ಎಂದರು. ಈಗ ಕಾಲ್ತುಳಿತ ಪ್ರಕರಣದಲ್ಲಿ ಸತ್ತವರಿಗೆ ಕೊಟ್ಟ ರೀತಿಯಲ್ಲಿ ಅವರಿಗೆ ಪರಿಹಾರ ಕೊಡಲು ಆಗಲ್ಲ. ಅವರಿಗೆ ಸರ್ಕಾರಿ ಉದ್ಯೋಗ ಕೊಡುವ ಪ್ರಕ್ರಿಯೆ ನಡೆಯುತ್ತಿದೆ. ಶೀಘ್ರದಲ್ಲಿ ಅವರಿಗೆ ಸರ್ಕಾರಿ ಉದ್ಯೋಗ ಸಿಗುತ್ತದೆ ಎಂದು ಹೇಳಿದರು.

ಮನೆ ಮಂಜೂರು ಮಾಡಲು ಲಂಚ ನೀಡಬೇಕು ಎಂಬ ಆಡಿಯೋ ವೈರಲ್ ವಿಚಾರದ ಕುರಿತು ಪ್ರತಿಕ್ರಿಯಿಸಿ, ಬಿಆರ್ ಪಾಟೀಲ್ ಆಪಾದನೆ ಎಷ್ಟರ ಮಟ್ಟಿಗೆ ನಿಜ ಎಂಬ ಬಗ್ಗೆ ತನಿಖೆಯಾಗಬೇಕು. ಈಗಾಗಲೇ ವಸತಿ ಸಚಿವರು ನಮ್ಮಲ್ಲಿ ಆ ರೀತಿ ನಡೆದಿಲ್ಲ ಎಂದು ಸಿಎಂ ಭೇಟಿ ಮಾಡಿ ಸ್ಪಷ್ಟನೆ ನೀಡಿದ್ದಾರೆ ಎಂದರು.


Spread the love

LEAVE A REPLY

Please enter your comment!
Please enter your name here