ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದಿದ್ದ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌!

0
Spread the love

ಗಾಂಧಿನಗರ:- ಗುಜರಾತ್ ನ ಅಹಮದಾಬಾದ್ ನಲ್ಲಿ ಇತ್ತೀಚೆಗೆ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಪವಾಡದ ರೀತಿ ಬದುಕುಳಿದಿದ್ದ ಓರ್ವ ವ್ಯಕ್ತಿ ವಿಶ್ವಾಸ್‌ ಕುಮಾರ್ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ವಿಮಾನ ದುರಂತದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದು ವಿಶ್ವಾಸ್‌ ಬದುಕುಳಿದಿದ್ದರು. ಗಂಭೀರ ಗಾಯಗೊಂಡಿದ್ದ ವಿಶ್ವಾಸ್, ಸಣ್ಣಪುಟ್ಟ ಗಾಯಗಳಿಂದ ಅಹಮದಾಬಾದ್‌ನ ಸಿವಿಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಅನೇಕ ಗಣ್ಯರು ಗಾಯಾಳು ಆರೋಗ್ಯ ವಿಚಾರಿಸಿದ್ದರು.

Advertisement

ಇದೀಗ ಚಿಕಿತ್ಸೆ ಬಳಿಕ ವಿಶ್ವಾಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದರು. ನಂತರ ತನ್ನ ಸಹೋದರನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ತನ್ನ ಜೊತೆ ಪ್ರಯಾಣಿಸಿದ್ದ ಸಹೋದರ ವಿಮಾನ ಪತನದಲ್ಲಿ ಮೃತಪಟ್ಟಿದ್ದ. ಇದೀಗ ಸಹೋದರನ ಅಂತ್ಯಕ್ರಿಯೆ ನಡೆದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಶ್ವಾಸ್‌ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಕಣ್ಣೀರು ಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here