ಮಂಡ್ಯ: ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅನ್ನೋದು ದೆಹಲಿ ಮಟ್ಟದಲ್ಲಿ ಗೊತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೆಹಲಿ ಮಟ್ಟದಲ್ಲಿ ಚನ್ನಪಟ್ಟಣ ಟಿಕೆಟ್ ಸಮಸ್ಯೆ ಇಲ್ಲ. ಕಳೆದ ಎರಡು ಬಾರಿ ಚನ್ನಪಟ್ಟಣದಲ್ಲಿ ನಾನು ಪ್ರತಿನಿಧಿಸಿದ್ದೇನೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅನ್ನೋದು ದೆಹಲಿ ಮಟ್ಟದಲ್ಲಿ ಗೊತ್ತಿದೆ.
Advertisement
ಮೂರು ಉಪಚುನಾವಣೆ ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಪಡೆ ಇದೆ. ಗೆಲ್ಲುವ ದೃಷ್ಟಿಯಿಂದ ಬಿಜೆಪಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಟ್ಟುಕೊಟ್ಟೆವು. ನಮ್ಮ ಕುಟುಂಬದವರನ್ನೇ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಆ ರೀತಿ ಔದಾರ್ಯ ಅವರ ಕಡೆಯಿಂದಲೂ ಬರಬೇಕು ಎನ್ನುತ್ತಾ ಪರೋಕ್ಷವಾಗಿ ಸಿಪಿವೈ ಜೆಡಿಎಸ್ ಚಿಹ್ನೆಯಡಿ ನಿಲ್ಲಲಿ ಎಂದು ಕುಮಾರಸ್ವಾಮಿ ಹೇಳಿದರು.