ವಂಚನೆ ಕೇಸ್: ಚೈತ್ರಾಗೆ ಜಾಮೀನು ಮಂಜೂರು

0
Spread the love

ಬೆಂಗಳೂರು:- ಉದ್ಯಮಿಗೆ ಕೋಟಿ ಕೋಟಿ ಹಣ ಪಡೆದು ವಂಚನೆ ಎಸಗಿದ ಕೇಸ್ ಗೆ ಸಂಬಂಧಿಸಿದಂತೆ ಚೈತ್ರಾಗೆ ಕೊನೆಗೂ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರು ಮ್ಯಾಜಿಸ್ಟ್ರೇಟ್​ ಕೋರ್ಟ್​ ಜಾಮೀನು ನೀಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು.

Advertisement

ಬಳಿಕ ಚೈತ್ರಾ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಸಿಬಿಯು ಆರೋಪಿಗಳ ವಿರುದ್ಧ ಸುಮಾರು 800 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಮುಕ್ತಾಯಗೊಳಿಸಿದೆ.


Spread the love

LEAVE A REPLY

Please enter your comment!
Please enter your name here