ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ: ಆರ್. ಅಶೋಕ್

0
Spread the love

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಸಿದ್ದರಾಮಯ್ಯಗೆ ಗಣೇಶನ ಶಾಪ ತಟ್ಟಿದೆ. ಗಣೇಶನ ಬಂಧನ ಮಾಡಿದ್ದೇ ಶಾಪ. ಈ ನಿರ್ಣಯ ಬಿಜೆಪಿಯ ಗೆಲುವು. ಬಿಜೆಪಿ ಈ ಹಗರಣದ ಕುರಿತು ಪಾದಾಯಾತ್ರೆ ಮಾಡಿತ್ತು. ವಿಧಾನಸಭೆಯ ಒಳಗೂ ಹೊರಗೂ ಪ್ರತಿಭಟನೆ ಮಾಡಿತ್ತು. ರಾಮಕೃಷ್ಣ ಹೆಗಡೆಯವರ ಶಿಷ್ಯ ಆಗಿದ್ದರೆ, ನೈತಿಕತೆ ಇದ್ದರೆ ರಾಜಿನಾಮೆ ಕೊಡಲಿ ಎಂದು ಆಗ್ರಹಿಸಿದರು.

Advertisement

ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರಿಗೆ ಕಳೆದ ನಾಲ್ಕೈದು ತಿಂಗಳಿಂದ ಸಿಎಂ ವಿರುದ್ಧದ ದಾಖಲೆಗಳನ್ನು ತೆಗೆಯಲಾಗುತ್ತಿದೆ. ಈ ಬಗ್ಗೆ ಸಿಎಂಗೆ ಗೊತ್ತೇ ಇಲ್ಲವಾ? ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ತಿಳಿದುಕೊಂಡು ಸಂಗೊಳ್ಳಿ ರಾಯಣ್ಣನ ತರಹವೇ ನನ್ನ ಬೆನ್ನಿಗೂ ಚೂರಿ ಹಾಕುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣನಂತೆ ನನಗೂ ಹಿತ ಶತ್ರುಗಳ ಕಾಟವಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ಹೇಳಿಕೊಂಡಿದ್ದು, ಎಚ್ಚೆತ್ತುಕೊಂಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here