ಚಾಮರಾಜನಗರ: ಕೊಳ್ಳೇಗಾಲದ ಮಾಜಿ ಶಾಸಕ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ(72) ಅವರು ನಿನ್ನೆ ಹೃದಯಾಘಾತದಿಂದ ವಿಧಿವಶರಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು, ಅವರ ಅಂತಿಮ ದರ್ಶನವನ್ನು ಪಡೆದುಕೊಂಡರು.ಕೊಳ್ಳೇಗಾಲಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಿದ್ದರಾಮಯ್ಯ ಅವರು, ಜಯಣ್ಣ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಚ ಇರಿಸಿ ಅಂತಿಮ ಗೌರವ ಸಲ್ಲಿಸಿದ್ರು.
ಇದೇ ವೇಳೆ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಮೃತ ಜಯಣ್ಣ ಅವರಿಗೆ ಜಿಲ್ಲಾಡಳಿತದಿಂದ ಸರ್ಕಾರಿ ಗೌರವ ಸಲ್ಲಿಸಿದ್ರು.ಜಯಣ್ಣ ಮುಖ್ಯಮಂತ್ರಿಯವರಿಗೆ ಪರಮಾಪ್ತರಾಗಿದ್ದರು. ಮೊದಲಿಗೆ ಅವರಿಬ್ಬರೂ ಜೆಡಿಎಸ್ ನಲ್ಲಿದ್ದರು ಮತ್ತು ಜಯಣ್ಣ 2013 ರಲ್ಲಿ ಕಾಂಗ್ರೆಸ್ ಟಿಕೆಟ್ನಿಂದ ಸ್ಪರ್ಧಿಸಿ ಕೊಳ್ಳೇಗಾಲದ ಶಾಸಕರಾಗಿದ್ದರು.



