ಚಿಕ್ಕಬಳ್ಳಾಪುರ: ಮದುವೆ ನೆಪದಲ್ಲಿ ಪುರುಷರಿಗೆ ವಂಚನೆ ಮಾಡುತ್ತಿದ್ದ ಮಹಿಳೆಯನ್ನು ಚಿಕ್ಕಬಳ್ಳಾಪುರ ಸೈಬರ್ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋಮಲ ಬಂಧಿತ ಮಹಿಳೆಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ಫಾರ್ಮಸಿಸ್ಟ್ ರಾಘವೇಂದ್ರ ಎನ್ನುವವರನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ಅವರಿಂದ ಏಳೂವರೆ ಲಕ್ಷ ರೂಪಾಯಿ ಹಣ ಪೀಕಿದ್ದಾಳೆ.
ಹಣ ಅಕೌಂಟ್ಗೆ ಬರುತ್ತಿದ್ದಂತೆ ಅವರ ಪೋನ್ ನಂಬರ್ಗಳನ್ನು ಬ್ಲಾಕ್ ಮಾಡಿ ಜೂಟ್ ಆಗಿದ್ದಾಳೆ. ಈ ಪ್ರಕರಣ ದಾಖಲಿಸಿಕೊಂಡು ಚಿಕ್ಕಬಳ್ಳಾಪುರ ಸೈಬರ್ಠಾಣೆ ಪೊಲೀಸರು, ಮದನಾರಿ ಕೋಮಲರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈಕೆ ಮದುವೆ ಮಾಡಿಕೊಳ್ಳುವುದಾಗಿ ಆಮಿಷವೊಡ್ಡಿ ಪುರುಷರನ್ನು ವಂಚಿಸುವುದನ್ನೇ ಕಾಯಕ ಮಾಡಿಕೊಂಡಿದ್ದಾಳೆ ಎಂಬುದು ಬೆಳಕಿಗೆ ಬಂದಿದೆ. ಕೋಮಲಾಗೆ 20 ವರ್ಷದ ಮಗ, 16 ವರ್ಷದ ಮಗಳಿರುವುದಾಗಿ ತಿಳಿದು ಬಂದಿದ್ದು, ಐಷಾರಾಮಿ ಜೀವನಕ್ಕಾಗಿ ಅಮಾಯಕರಿಗೆ ಬಲೆ ಬೀಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.