ಚಿಕ್ಕಮಗಳೂರು: ಕರೆಂಟ್ ಹೊಡೆದು ನವವಿವಾಹಿತ ಲೈನ್ ಮೆನ್ ಸಾವನ್ನಪ್ಪಿದ ಘಟನೆ ಎನ್.ಆರ್.ಪುರ ತಾಲೂಕಿನ ಹೊನ್ನೆಕೊಪ್ಪ ಗ್ರಾಮದಲ್ಲಿ ಜರುಗಿದೆ. 26 ವರ್ಷದ ಪ್ರವೀಣ್ ಮೃತ ಲೈನ್ ಮನ್. ಬಾಗಲಕೋಟೆಯ ಪ್ರವೀಣ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೆಸ್ಕಾಂ ಕಚೇರಿಯಲ್ಲಿ ಲೈನ್ಮೆನ್ ಆಗಿ ಕೆಲಸ ಮಾಡುತ್ತಿದ್ದರು.
ಇಂದು ಹೊನ್ನೆಕೊಪ್ಪ ಗ್ರಾಮದಲ್ಲಿ ಕಂಬ ಹತ್ತಿ ಫ್ಯೂಸ್ ಹಾಕಿ ವಿದ್ಯುತ್ ಲೈನ್ ದುರಸ್ಥಿ ಮಾಡುವ ವೇಳೆ ವಿದ್ಯುತ್ ಶಾಕ್ ನಿಂದ ತೀವ್ರ ಅಸ್ವಸ್ತಗೊಂಡಿದ್ದರು. ಕಂಬದಿಂದ ಬಿದ್ದು ಅಸ್ವಸ್ಥನಾಗಿ ಒದ್ದಾಡುತ್ತಿದ್ದ ಅವರನ್ನು ಸ್ಥಳಿಯರು ಹಾಗೂ ಇತರೇ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು
ಆಸ್ಪತ್ರೆಗೆ ಬರುವ ಮಾರ್ಗಮಧ್ಯೆಯೇ ಅವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



