ಬಾಲ್ಯ ವಿವಾಹದಿಂದ ಹೆಣ್ಣುಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ: ರಂಜಿತಾ ಎಸ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಮತ್ತು ಮಹಿಳಾ ಸಬಲೀಕರಣ ಕೋಶದ ವತಿಯಿಂದ ಹಾತಲಗೇರಿ ಗ್ರಾಮದ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆಯಲ್ಲಿ ಬಾಲ್ಯ ವಿವಾಹದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಯಿತು.

Advertisement

ಎನ್.ಎಸ್.ಎಸ್. ಸ್ವಯಂ ಸೇವಕರಾದ ರಂಜಿತಾ ಎಸ್ ಮಾತನಾಡಿ, ಬಾಲ್ಯ ವಿವಾಹದಿಂದ ಹೆಣ್ಣುಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದರು. ಬಸನಗೌಡ ಕಾಶೀಗೌಡರ ಮಾತನಾಡಿ, ಈ ಬಾಲ್ಯ ವಿವಾಹಕ್ಕೆ ಮುಖ್ಯ ಕಾರಣ ಬಡತನ, ಅನಕ್ಷರತೆಯಾಗಿದೆ. ಬಾಲ್ಯ ವಿವಾಹ ಮಾಡುವವರಿಗೆ 1 ಲಕ್ಷ ರೂ ದಂಡ ಮತ್ತು ಜೈಲು ಶಿಕ್ಷೆಯಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ  ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಎನ್.ಎಸ್.ಎಸ್. ಘಟಕದ ಸಹ ಕಾರ್ಯಕ್ರಮಾಧಿಕಾರಿ ಪ್ರೊ. ವೀರಣ್ಣ ಬಡಿಗೇರ, ಮಹಿಳಾ ಸಬಲೀಕರಣ ಕೋಶದ ವತಿಯಿಂದ ಪ್ರೊ. ವಿಶಲಾ ತೆಳಗಡೆ, ಪ್ರೊ. ಗೌರಾ ವಾಯ್, ಎನ್.ಎಸ್.ಎಸ್. ತಂಡದ ನಾಯಕರಾದ ಆಕಾಶ ಕಳಗಣ್ಣವರ, ಫಕ್ಕೀರೇಶ ಒಂಟಿ, ರಂಜಿತಾ ಎಸ್., ಅಕ್ಷತಾ ದೊಡ್ಡಮನಿ, ಹಾತಲಗೇರಿ ಗ್ರಾಮದ ಉನ್ನತೀಕರಿಸಿದ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಗೀತಾ ಕಟಗಿ, ಶಿಕ್ಷಕರಾದ ಲಿಂಗನಗೌಡ ಪಾಟೀಲ, ದೈಹಿಕ ಶಿಕ್ಷರಾದ ಸವಿತಾ ಅಮರಶೆಟ್ಟಿ, ಎನ್.ಎಸ್.ಎಸ್. ಘಟಕದ ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here