ಮಕ್ಕಳು ಜವಾಬ್ದಾರಿಯಿಂದ ಬದುಕಬೇಕು

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಇಂದು ಆಧುನಿಕ ತಂತ್ರಜ್ಞಾನ ಬೆಳೆದಂತೆಲ್ಲಾ ಮಕ್ಕಳಲ್ಲಿ ಓದಿನ ಆಸಕ್ತಿ ಕುಂಠಿತಗೊಳ್ಳುತ್ತಿದ್ದು, ಇದರಿಂದ ಮೌಲ್ಯಯುತವಾದ ಶಿಕ್ಷಣ ಪಡೆಯಲು ಆಗದೆ ಮಕ್ಕಳ ಭಾವೀ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ. ಮಕ್ಕಳು ಜವಾಬ್ದಾರಿಯಿಂದ ಬದುಕಿದಲ್ಲಿ ಸುಂದರ ಸಮಾಜ ಕಟ್ಟಲು ಸಾಧ್ಯವಾಗುತ್ತದೆ ಎಂದು ಶಿರಹಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಬಿ.ಜಿ. ಗಿರಿತಿಮ್ಮಣ್ಣವರ ಹೇಳಿದರು.

Advertisement

ಅವರು ಪಟ್ಟಣದ ಆರ್.ಎನ್. ದೇಶಪಾಂಡೆ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ 2024/25ನೇ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್‌ಎಸ್‌ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಮಾರೋಪ ಸಮಾರಂಭದಲ್ಲಿ ಸಾಧಕ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಮಾತನಾಡಿದರು.

ಅಧ್ಯಕ್ಷತೆಯನ್ನು ಪ್ರಾಚಾರ್ಯ ಆರ್.ಎಂ. ಕಲ್ಲನಗೌಡರ ವಹಿಸಿದ್ದರು. ಪ.ಪಂ ಸದಸ್ಯ ನಾಗರಾಜ ದೇಶಪಾಂಡೆ, ಎಸ್.ಸಿ. ಬಡ್ನಿ, ಅಶೋಕ ಸೋನಗೋಜಿ, ಸುಮನ ಚವಡಿ, ಶಿವಪ್ಪ ಮುದಿಯಜ್ಜನವರ, ಅನುಪಮಾ, ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.


Spread the love

LEAVE A REPLY

Please enter your comment!
Please enter your name here