ವಿಜಯಸಾಕ್ಷಿ ಸುದ್ದಿ, ಗದಗ: ಪ್ರಕಲ್ಪ ಶಿಕ್ಷಣ ಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮಕ್ಕಳಿಗೆ ರಾಧಾ-ಕೃಷ್ಣರ ವೇಷಭೂಷಣ ಸ್ಪರ್ಧೆ ಹಾಗೂ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಕ್ಕಳಿಗೆ ಬಾಲಕೃಷ್ಣ ಹಾಗೂ ರಾಧೆಯ ವೇಷ ಧರಿಸುವ ಮೂಲಕ ನಮ್ಮ ಧಾರ್ಮಿಕ, ಸಾಂಸ್ಕೃತಿಕ ಪರಂಪರೆಯ ಪರಿಚಯ ಮಾಡಿಸುವುದು ಕಾರ್ಯಕ್ರಮದ ಉದ್ದೇಶವಾಗಿತ್ತು. ಭಕ್ತಿ ಮತ್ತು ಗೌರವದಿಂದ ಆಚರಿಸುವ ಇಂತಹ ಸಂಪ್ರದಾಯಗಳು ಮಕ್ಕಳಲ್ಲಿ ಧರ್ಮ, ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಗೌರವ ಬೆಳೆಸುತ್ತವೆ ಎಂದು ಸಂಸ್ಥೆ ತಿಳಿಸಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕ ಎಸ್.ವಿ. ಹುಬ್ಬಳ್ಳಿ ವಹಿಸಿದ್ದರು. ಮಾರ್ಗದರ್ಶಕಿ ಎಸ್.ಎನ್. ಹುಬ್ಬಳ್ಳಿ, ಕಾರ್ಯದರ್ಶಿ ಪಿ.ಎಸ್. ಹುಬ್ಬಳ್ಳಿ ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ಪುಷ್ಪ ಪಿ. ಮೇಗೇರಿ ನಿರೂಪಿಸಿದರು.



