ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: ಸರ್ಕಾರದ ಅಮಾನತು ಆದೇಶ ಸರಿ ಇದೆ – ಡಾ.ಜಿ.ಪರಮೇಶ್ವರ್

0
Spread the love

ಬೆಂಗಳೂರು: ವಿಕಾಸ್ ಕುಮಾರ್ ಅಮಾನತು ಆದೇಶವನ್ನು ರದ್ದುಪಡಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಿ ಇದೀಗ ರಾಜ್ಯ ಸರ್ಕಾರ ಕರ್ನಾಟಕ ಹೈಕೋರ್ಟ ಮೆಟ್ಟಿಲೇರಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

Advertisement

ನಾವು ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದೇವೆ,  ಸರ್ಕಾರದ ಅಮಾನತು ಆದೇಶ ಸರಿ ಇದೆ ಅನ್ನೋದು ನಮ್ಮ ವಾದ ಎಂದರು. ಬಳ್ಳಾರಿ ಜೈಲಿನಲ್ಲಿ ಕೈದಿಗಳ ಗದ್ದಲ, ಫೋಟೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಮತ್ತೆ ಆ ರೀತಿ ಆಗದಂತೆ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಹೇಳಿದರು.

ಧಾರವಾಡ ಎಸಿಪಿ ನಾರಾಯಣ ಬರಮಣ್ಣಿ ವಿಆರ್​ಎಸ್ ವಿಚಾರವಾಗಿ ಮಾತನಾಡಿ, ಅವರು ಹಾಗೇನೂ ಮಾಡಲ್ಲ, ಆ ರೀತಿ ಏನೂ ಇಲ್ಲ. ಸಚಿವ ಹೆಚ್.ಕೆ. ಪಾಟೀಲ್ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಪೋಸ್ಟಿಂಗ್ ಕೊಡ್ತೇವೆ. ಮುಖ್ಯಮಂತ್ರಿಗಳು ಉದ್ದೇಶಪೂರ್ವಕವಾಗಿ ಆ ರೀತಿ ಮಾಡಲಿಲ್ಲ. ಆ ಸಂದರ್ಭದಲ್ಲಿ ಸಿಎಂ ಹಾಗೆ ನಡೆದುಕೊಂಡರು ಅಷ್ಟೇ ಎಂದರು.


Spread the love

LEAVE A REPLY

Please enter your comment!
Please enter your name here