ಚಿತ್ರದುರ್ಗ:- ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕಾಲ್ಕೆರೆ ಗ್ರಾಮದ ಕೆರೆಯಲ್ಲಿ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜರುಗಿದೆ.
ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಕಾಲು ಜಾರಿಬಿದ್ದು ಈ ದುರಂತ ಸಂಭವಿಸಿದೆ. ಕವಿತಾ ಹನುಮಂತಪ್ಪ(14), ಪ್ರಜ್ವಲ್ ಪ್ರಭು(12) ಮೃತರು.
ಘಟನೆ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



