ಸಿಐಟಿಯು ವತಿಯಿಂದ ಕಾರ್ಮಿಕ ದಿನಾಚರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯುನಿಯನ್ ಗದಗ ಜಿಲ್ಲಾ ಸಮಿತಿ ವತಿಯಿಂದ ವಿಶ್ವ ಕಾರ್ಮಿಕ ದಿನಾಚರಣೆಯನ್ನು ನಗರದ ಗಾಂಧಿ ಸರ್ಕಲ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು.

Advertisement

ಈ ಸಂದರ್ಭದಲ್ಲಿ ಮಹೇಶ ಹಿರೇಮಠ ಮಾತನಾಡಿ, ಕೇಂದ್ರ ಸರ್ಕಾರವು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರುವ ಮೂಲಕ ಕಾರ್ಮಿಕರನ್ನು ಬೀದಿಪಾಲು ಮಾಡಲು ಹೊರಟಿದೆ. ಹಾಗಾಗಿ ಇದೇ ತಿಂಗಳು 20ರಂದು ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಈ ಮುಷ್ಕರದಲ್ಲಿ ಎಲ್ಲಾ ಕಾರ್ಮಿಕರು ಭಾಗವಹಿಸಬೇಕೆಂದು ವಿನಂತಿಸಿದರು.

ಈ ಸಂದರ್ಭದಲ್ಲಿ ಬಸವರಾಜ ಮಂತೂರ, ಮಹೇಶ ಹಿರೇಮಠ, ರುದ್ರಗೌಡ ಸಂಕನಗೌಡ ಗೌಡರ, ದೇವಪ್ಪ ಕಲ್ಮನಿ, ಬಸವರಾಜ ಅರ್ಕಸಾಲಿ, ಸುಶೀಲಾ ಚಲವಾದಿ, ಯಶೋಧಾ ಬೆಟಗೇರಿ, ಚನ್ನಮ್ಮ ಶ್ಯಾವಿ, ಯಮುನಾ ಗೋಟೂರ, ಬೀಬಿಜಾನ ಮುಲ್ಲಾ, ಸುನಂದಾ ಶ್ಯಾವಿ ಸೇರಿದಂತೆ ಸಿಐಟಿಯು ಕಾರ್ಯಕರ್ತರು ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here