HomeGadag Newsಶೌಚಾಲಯ ತೆರವುಗೊಳಿಸಿ ಸಮುದಾಯ ಭವನ ನಿರ್ಮಿಸಿ

ಶೌಚಾಲಯ ತೆರವುಗೊಳಿಸಿ ಸಮುದಾಯ ಭವನ ನಿರ್ಮಿಸಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಚನ್ನಮ್ಮ ಸರ್ಕಲ್ ಹತ್ತಿರ ಸಿಕ್ಕಲಿಗಾರ್ ಓಣಿ 32ನೇ ವಾರ್ಡಿನಲ್ಲಿ ಇರುವ ಸುಲಭ ಶೌಚಾಲಯ ತೆರವುಗೊಳಿಸಿ ಸಮುದಾಯ ಭವನ ನಿರ್ಮಿಸಬೇಕು ಎಂದು ಓಣಿಯ ಸ್ಥಳೀಯರು ಹಾಗೂ ಕ್ರಾಂತಿ ಸೇನಾ ಸಂಘಟನೆ ನೇತೃತ್ವದಲ್ಲಿ ಗದಗ-ಬೆಟಗೇರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ರಾಂತಿ ಸೇನಾ ಗದಗ ಜಿಲ್ಲಾ ಗೌರವ ಕಾರ್ಯದರ್ಶಿ ಪ್ರವೀಣ ಹಬೀಬ ಮಾತನಾಡಿ, 32ನೇ ವಾರ್ಡಿನಲ್ಲಿರುವ ಈ ಶೌಚಾಲಯ ಸ್ವಚ್ಛತೆ ಇಲ್ಲದೆ ಹಾಳು ಬಿದ್ದು ವಾಸನೆ ಹರಡಿ ಜನರಿಗೆ ಸಾಕಷ್ಟು ತೊಂದರೆ ಉಂಟಾಗಿದೆ. ಕಾರಣ, ಈ ಸುಲಭ ಶೌಚಾಲಯ ತೆರವುಗೊಳಿಸಿ ಸಮುದಾಯ ಭವನ ನಿರ್ಮಿಸಬೇಕೆಂದು ವಿನಂತಿಸಿದರು.

ರಾಮಣ್ಣ ನವಲಗುಂದ ಮಾತನಾಡಿ, ೩೨ನೇ ವಾರ್ಡಿನ ಜನರಿಗೆ ಯಾವುದೇ ಸಮುದಾಯ ಭವನ ಇಲ್ಲದೆ ಶುಭ ಕಾರ್ಯಗಳನ್ನು ನಡೆಸಲು ಅನುಕೂಲಗಳಿಲ್ಲ. ಕಾರಣ, ಸಮುದಾಯ ಭವನ ನಿರ್ಮಾಣವಾದರೆ ಅನುಕೂಲವಾಗುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!