ವಯನಾಡಿನಲ್ಲಿ ಘೋರ ಗುಡ್ಡ ಕುಸಿತ: ಮೃತ ಕನ್ನಡಿಗರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

0
Spread the love

ನವದೆಹಲಿ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಜನರು ಸಂಕಷ್ಟದಲ್ಲಿದ್ದಾರೆ. ಘೋರ ಗುಡ್ಡ ಕುಸಿತದಲ್ಲಿ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಎನ್​ಡಿಆರ್​ಎಫ್​, ಸ್ಥಳೀಯ ಪೊಲೀಸರು ಮತ್ತು ಸೈನ್ಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ಕೇರಳದ ವಯನಾಡು ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Advertisement

ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here