ಬೆಂಗಳೂರು:- ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಬೈರತಿ ಸುರೇಶ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನ ಮಾಡಲಿದೆ. ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣ ಅವರನ್ನೇ ಕೇಳಬೇಕು. ಅವರು ಯಾವ ಅರ್ಥದಲ್ಲಿ ಮಾತಾಡಿದ್ದಾರೆ ಎಂದು ಗೊತ್ತಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಇದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಇದ್ದಾರೆ. ಸದ್ಯಕ್ಕೆ ಅವರ ಸ್ಥಾನ ಅಭಾದಿತ ಎಂದಿದ್ದಾರೆ.
ದಸರಾ ಯಾವ ರೀತಿ ಮಾಡಬೇಕು ಎಂದು ಸಿಎಂ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದೆ. ಸುಮಾರು 40 ರಿಂದ 50 ಕೋಟಿ ರೂ. ವೆಚ್ಚದಲ್ಲಿ ಆಚರಣೆ ಆಗಬೇಕು ಎಂಬ ಚರ್ಚೆ ಮಾಡಲಾಗಿದೆ. ಉದ್ಘಾಟಕರು ಯಾರು ಎಂದು ತೀರ್ಮಾನ ಮಾಡುವ ಅಧಿಕಾರ ಸಿಎಂ ಅವರಿಗೆ ಕೊಡಲಾಗಿದೆ. ಒಂದೇ ವಿಚಾರಕ್ಕೆ ಸಂಬಂಧಿಸಿದ ನಾಲ್ಕೈದು ಸ್ಥಬ್ಧಚಿತ್ರಗಳು ಇರಬಾರದು ಎಂದು ತೀರ್ಮಾನ ಆಗಿದೆ. ಜನಪರವಾದ ಸ್ತಬ್ಧ ಚಿತ್ರಗಳು ಇರಬೇಕು, ಮೈಸೂರು ಸಂಸ್ಕೃತಿ ಎತ್ತಿ ಹಿಡಿಯುವ ಸ್ತಬ್ಧ ಚಿತ್ರಗಳಿಗೆ ಪ್ರಮುಖ ಆದ್ಯತೆ ಕೊಡಬೇಕೆಂದು ತೀರ್ಮಾನ ಮಾಡಲಾಗಿದೆ ಎಂದಿದ್ದಾರೆ.