ಬೆಳಗಾವಿ: ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಸ್ಥರಿಗೆ ಹೋಳಿಗೆ ಊಟ ಬಡಿಸಿದ್ದ ವೃದ್ಧೆಗೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಸನ್ಮಾನಿಸಿದ್ದಾರೆ. ರಾಯಭಾಗ ತಾಲೂಕಿನ ಸುತ್ತಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿಗೆ ಸಿಎಂ ಸನ್ಮಾನ ಮಾಡಿದ್ದು, ಅದಲ್ಲದೆ ಸಿಎಂಗೆ ಕಂಬಳಿ ಹೊದಿಸಿ, ಹಾರ ಹಾಕಿ ಹೋಳಿಗೆ ತಿನ್ನಿಸಿದ್ದಾರೆ.
ಊಟ ಹಾಕಿಸಿದ ವಿಚಾರ ತಿಳಿದ ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ. ಮರಳಿ ರೇಷ್ಮೆ ಸೀರೆ ಕೊಟ್ಟು ವೃದ್ಧೆಯನ್ನು ಸನ್ಮಾನಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ನಿಲ್ಲಿಸಬೇಡಿ ಎಂದು ಅಕ್ಕಾತಾಯಿ ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಸಿಎಂ ಭರವಸೆ ನೀಡಿದ್ದಾರೆ.
ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆಯಾದ ಅಕ್ಕಾತಾಯಿ ಲಂಗೋಟಿ ಅವರು ತನ್ನ ಹತ್ತು ಕಂತಿನ ಗೃಹಲಕ್ಷ್ಮಿ ಹಣವನ್ನ ಕೂಡಿಟ್ಟು ಮೊನ್ನೆ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು.



