ಬೆಂಗಳೂರು: ಸಿಎಂ ನೋಡೋಕೆ ಸಿಂಪಲ್. ಆದರೆ ಬಂದ ಲಾಯರ್ʼಗಳೆಲ್ಲರೂ ಕಾಸ್ಟ್ಲಿ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಬೇರೆ ದಾರಿ ಉಳಿದಿಲ್ಲ. ಅವರು ಕಾನೂನು ಪಂಡಿತರು. ಸಿಂಪಲ್ ಚೀಫ್ ಮಿನಿಸ್ಟರ್, ಕಾಸ್ಟ್ಲಿ ಲಾಯರನ್ನು ಕರೆಸಿ ವಾದ ಮಂಡಿಸಿದ್ದರು.
ಸಿಎಂ ನೋಡೋಕೆ ಸಿಂಪಲ್. ಆದರೆ ಬಂದ ಲಾಯರ್ಗಳೆಲ್ಲರೂ ಕಾಸ್ಟ್ಲಿ. ಅವರೆಲ್ಲರೂ ವಾದ ಮಾಡಿದ್ದರೂ ಸತ್ಯವನ್ನು ಮುಚ್ಚಿಡಲು ಸಾಧ್ಯವಾಗಿಲ್ಲ. ಇನ್ನೆಲ್ಲಿಗೆ ಹೋದರೂ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಸುಳ್ಳು ಗೆಲ್ಲುವುದಿಲ್ಲ. ಸುಳ್ಳು ಹಿಡಿದುಕೊಂಡು ಹೋದರೆ ನಗೆಪಾಟಲಿಗೆ ಈಡಾಗುತ್ತೀರಿ ಎಂದು ಎಚ್ಚರಿಸಿದರು.
ನೀವೂ ಸತ್ಯಕ್ಕೆ ಜೈ ಎನ್ನಿ. ರಾಜೀನಾಮೆ ಕೊಡುವುದೊಂದೇ ನಿಮಗಿರುವ ದಾರಿ. ಸಿದ್ದರಾಮಯ್ಯನವರೇ ಇದಕ್ಕಿಂತ ಜಾಸ್ತಿ ಭಂಡತನ ಮಾಡದಿರಿ. ಈಗ ಮಾಡಿದ್ದೇ ಜಾಸ್ತಿ ಭಂಡತನ. ಇನ್ನೂ ಭಂಡತನ. ರಾಜೀನಾಮೆ ಕೊಟ್ಟು ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಿರಿ ಎಂದು ತಿಳಿಸಿದರು.