ಮೈಸೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಹೀಗಾಗಿ ಜೀವನದಿ ಕಾವೇರಿ ಅಪಾಯದ ಮಟ್ಟವನ್ನ ಮೀರಿ ಹರಿಯುತ್ತಿದ್ದಾಳೆ. ಅಷ್ಟೇ ಅಲ್ಲ ನದಿ ತಟದಲ್ಲಿ ಪ್ರವಾಹ ಭೀತಿಯನ್ನು ಕೂಡ ಸೃಷ್ಠಿ ಮಾಡಿದ್ದಾಳೆ. ಈ ಮಧ್ಯೆ ಸಂಪೂರ್ಣ ಭರ್ತಿಯಾಗಿರೊ ಕನ್ನಂಬಾಡಿ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಬಾಗಿನ ಅರ್ಪಿಸಿದ್ದಾರೆ.
Advertisement
ಹೌದು ಎರಡು ವರ್ಷಗಳ ನಂತರ ಹಳೇ ಮೈಸೂರ ಭಾಗದ ಜೀವನದಿ ಕಾವೇರಿ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕೆಆರ್ಎಸ್ ಜಲಾಶಯದಲ್ಲಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ್ದಾರೆ. ಸಿಎಂ, ಡಿಸಿಎಂಗೆ ಸಚಿವರಾದ ಎನ್.ಚಲುವರಾಯಸ್ವಾಮಿ, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಕಾಂಗ್ರೆಸ್ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ತನ್ವೀರ್ ಸೇಠ್, ರವಿಕುಮಾರ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.