ಮೈಸೂರು: ದಸರಾ ಜಂಬೂ ಸವಾರಿ ಮೆರವಣಿಗೆ ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗುತ್ತಿದ್ದು,
Advertisement
ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಜಂಬೂಸವಾರಿ ಸಾಗಲಿದೆ. ಈ ವೇಳೆ ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿವೆ.